Flowers in Chania

ಶಿವಮೊಗ್ಗ: ನಾಡು, ನುಡಿ, ಜಲ, ಗಡಿ ವಿಚಾರಗಳು ಬಂದಾಗ ಯಾವುದೇ ಸರ್ಕಾರವಿರಲಿ, ಪಕ್ಷಾತೀತವಾಗಿ ಸಮಸ್ಯೆಗಳನ್ನು ಎದುರಿಸಬೇಕು. ಇಡೀ ಕನ್ನಡ ನಾಡು ಈ ನಿಟ್ಟಿನಲ್ಲಿ ಒಂದಾಗಿ ನಿಲ್ಲಬೇಕು ಎಂದು ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಹೆಚ್‌.ಎಂ. ಚಂದ್ರಶೇಖರಪ್ಪ ಹೇಳಿದರು.

ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಪ್ರತಿ ಬಾರಿಯೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಅದರಲ್ಲಿ ಪ್ರಮುಖವಾಗಿ ಕಾವೇರಿ ನೀರಿನ ಸಮಸ್ಯೆ. ಈಗಾಗಲೇ ರಾಜ್ಯಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಹೀಗೆ ನೀರು ಹರಿಸುತಾ್ತ ಹೋದರೆ ಕರ್ನಾಟಕ ರಾಜ್ಯದ ರೈತರ ಮತ್ತು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದು ಹೇಗೆ. ಇಂತಹ ಸಂದರ್ಭಗಳಲ್ಲಿ ಪಕ್ಷಾತೀತವಾಗಿ ಒಂದಾಗಿ ಹೋರಾಟ ಮಾಡುವ ಮೂಲಕ ಸರ್ಕಾರದ ಕೈ ಬಲಪಡಿಸಿ ನಾಡಿನ ಪರ ಧ್ವನಿ ಎತ್ತುವಂತೆ ಮಾಡಬೇಕೆಂದರು.

ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳುವುದು ಇಂದು ಅನಿವಾರ್ಯವಾಗಿದೆ. ನಾಡಿನ ಹಿತಾಸಕ್ತಿಗಾಗಿ ರಾಜಕಾರಣ ಮಾಡುವುದು ತರವಲ್ಲ. ಅಭಿವೃದ್ದಿಗೂ ರಾಜಕಾರಣಕಕ್ೂ ವ್ಯತಾ್ಯಸವಿವೆ. ಚುನಾವಣೆಗೂ ಮುನ್ನ ಆಯಾ ಪಕ್ಷದ ಸಿದಾ್ಧಂತಗಳು ಬೇರೆಬೇರೆಯಾಗಿಯೇ ಇರುತ್ತವೆ. ಆದರೆ ಹೊಸ ಸರ್ಕಾರ ರಚನೆ ಆದಾಗ ಒಟಾ್ಟರೆ ಅಭಿವೃದ್ಧಿಗೆ ಒಟಾ್ಟಗಿ ಶ್ರಮಿಸಬೇಕಾಗುತ್ತದೆ. ಇದಕಾಕ್ಗಿ ಹೋರಾಟ ಕೂಡ ಅನಿವಾರ್ಯವಾಗುತ್ತದೆ ಎಂದರು.

ಮಾಜಿ ಶಾಸಕರುಗಳು ಕೂಡ ನಮ್ಮ ಕೆಲಸ ಏನೂ ಇಲ್ಲ ಎಂದು ಕುಳಿತುಕೊಳ್ಳಬಾರದು. ಇಲ್ಲಿಯೂ ಕೂಡ ಪಕ್ಷ ಮುಖ್ಯವಲ್ಲ. ಎಲಾ್ಲ ಮಾಜಿ ಶಾಸಕರು ಕೂಡ ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚಿಂತಿಸುತಾ್ತ ನಾಡು, ನುಡಿಯ ವಿಚಾರದಲ್ಲಿ ತಮ್ಮದೇ ಆದ ಸೇವೆ ಮಾಡಬೇಕು ಎಂದ ಅವರು, ಮುಂದಿನ ವಿಧಾನಸಭೆ ಕಲಾಪದಲ್ಲಿ ಎಲ್ಲರೂ ಕಾವೇರಿ ನೀರಿಗೆ ಸಂಬಂಧಿಸಿದಂತೆ ಒಟಾ್ಟಗಿ ನಿರ್ಧಾರ ತೆಗೆದುಕೊಳ್ಳಬೇಕು. ಈ ಎಲಾ್ಲ ವಿಚಾರಗಳಿಗೆ ಪ್ರತಿರೂಪವಾಗಿ ಪಕ್ಷಾತೀತವಾಗಿ ದೊಡ್ಡ ಮಟ್ಟದ ಸಭೆಯನ್ನು ಕರೆಯಬೇಕು ಎಂದು ಹೇಳಿದರು.

ಮಾಜಿ ಶಾಸಕರ ಸಂಘದ ನಿರ್ದೇಶಕ ಕೆ.ಜಿ. ಕುಮಾರಸಾ್ವಮಿ ಮಾತನಾಡಿ, ಕಾವೇರಿ ನೀರಿನ ಹೋರಾಟಕಕ್ೆ ವೇದಿಕೆ ಬೆಂಬಲಿಸುತ್ತದೆ ಎಂದರು.

Abhi

Abhi

Leave a Reply

Your email address will not be published. Required fields are marked *