ಶಿವಮೊಗ್ಗ :- ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮದಿನವನ್ನು ಇಂದು ನಗರ ಸೇರಿದಂತೆ ಜಿಲ್ಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ವಿವಿಧೆಡೆ ನಿರ್ಮಾಣ ಮಾಡಿದ್ದ ಕ್ರಿಸ್ಮಸ್ ಟ್ರೀ, ಏಸುವಿನ ಜನನ ಸಂದರ್ಭದ ಕ್ಷಣಗಳನ್ನು ನೆನಪಿಸುವ ಗೋದಲಿ ನೋಡುಗರ ಗಮನ ಸೆಳೆಯಿತು.
ನಿನ್ನೆ ಮಧ್ಯರಾತ್ರಿ ಹಾಗೂ ಸೋಮವಾರ ಮುಂಜನೆ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತ ಧರ್ಮೀಯರು ಪಾಲ್ಗೊಂಡಿದ್ದರು. ಚರ್ಚ್ಗಳಲ್ಲಿ ಕೇಕ್, ಚಾಕೊಲೆಟ್, ಸಿಹಿ ತಿಂಡಿ ಹಂಚಲಾಯಿತು.
ಮನೆಯಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿ ಹಬ್ಬದೂಟ ಮಾಡಲಾಯಿತು. ಚರ್ಚ್ಗಳಲ್ಲಿ ಶುಭಾಶಯ ಗೀತೆಗಳು, ಕ್ರಿಸ್ತರ ಸ್ತುತಿಯ ಗೀತೆಗಳು ಸಾಮೂಹಿಕವಾಗಿ ಕೇಳಿಬಂದವು. ಚರ್ಚ್ನಲ್ಲಿ ಫಾದರ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಹಾಗೂ ಪ್ರಾರ್ಥನೆ ನಡೆಯಿತು.
ಕ್ರಿಸ್ತರ ಜನನದ ಶುಭ ಗಳಿಗೆಯ ಸ್ಮರಣೆಗೆ ಬೆಳಕಿನ ಸಂಕೇತವಾಗಿ ಮೇಣದ ಬತ್ತಿ ಬೆಳಗಿಸಲಾಯಿತು. ಪುಟ್ಟ ಮಕ್ಕಳು ಸಾಂತಾಕ್ಲಾಸ್ ಸೇರಿ ತರಹೇವಾರಿ ವೇಷ ಧರಿಸಿ ಗಮನ ಸೆಳೆದರು.