Flowers in Chania

ಫೆ. 24: ಫ್ರೀಡಂ ಪಾರ್ಕ್‌ನ ಅಲ್ಲಮ ಪ್ರಭು ಬಯಲು ಮಂಟಪದಲ್ಲಿ 5ಗ್ಯಾರಂಟಿಗಳ ಜಿಲ್ಲಾ ಫಲಾನುಭವಿಗಳ ಸಮಾವೇಶ

ಶಿವಮೊಗ್ಗ :- ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳ ಜಿಲ್ಲಾ ಫಲಾನುಭವಿಗಳ ಸಮಾವೇಶ ಫೆ.೨೪ರಂದು ಶಿವಮೊಗ್ಗದ ಫ್ರೀಡಂಪಾರ್ಕ್‌ನ ಅಲ್ಲಮಪ್ರಭು ಬಯಲು ಮಂಟಪದಲ್ಲಿ ಆಯೋಜಿಸಲಾಗಿದ್ದು, ಈಗಾಗಲೇ ಶಿವಮೊಗ್ಗ ನಗರದಲ್ಲಿ ಸುಮಾರು ೧೫ ಸಾವಿರಕ್ಕೂ ಹೆಚ್ಚು ಅಹ್ವಾನ ಪತ್ರಿಕೆಯನ್ನು ಮನೆ ಮನೆಗೆ ಹಂಚಿದ್ದು ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ನಗರವೊಂದರಿಂದಲೇ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ, ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಹೆಚ್.ಸಿ.ಯೋಗೀಶ್ ಹೇಳಿದರು.

ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ೫ ಗ್ಯಾರಂಟಿಗಳು ಕೂಡ ಯಶಸ್ವಿಯತ್ತ ಸಾಗುತ್ತಿವೆ. ಶಿವಮೊಗ್ಗ ನಗರದಲ್ಲಿಯೇ 62 ಸಾವಿರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಇದ್ದಾರೆ. 62 ಸಾವಿರ ಮನೆಗಳಿಗೆ ಉಚಿತ ವಿದ್ಯುತ್ ಇದೆ. ಸುಮಾರು ೬೧ಲಕ್ಷ ಬಾರಿ ನಗರದ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. 100 ಕ್ಕೂ ಹೆಚ್ಚು ಜನರು ಯುವನಿಧಿಯಲ್ಲಿ ಹೆಸರು ನೊಂದಾಯಿಸಿಕೊಂಡಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮಹಿಳೆಯರ ಖಾತೆಗೆ ಅಕ್ಕಿಯ ಹಣ ಜಮಾ ಆಗಿದೆ ಎಂದು ವಿವರಿಸಿದರು.

ಶಿವಮೊಗ್ಗದಲ್ಲಿ ಅಂದು ಬೆಳಿಗ್ಗೆ 11ಗಂಟೆಗೆ ನಡೆಯುವ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ಸರ್ಕಾರಿ ಕಾರ್ಯಕ್ರಮವಾದ್ದರಿಂದ ಅಧಿಕಾರಿಗಳು ಇರುತ್ತಾರೆ. ಅಂದು ಡಿ.ಕೆ.ಶಿವಕುಮಾರ್ ಅವರಿಗೆ ಪಂಚ ಗ್ಯಾರಂಟಿಗಳ ಹಾರವನ್ನು ಹಾಕಲಾಗುವುದು. ಈ ಹಾರ ತುಂಬ ವಿಶೇಷವಾಗಿದ್ದು, ಗ್ಯಾರಂಟಿಗಳ ಮಹತ್ವವನ್ನು ಬಿಂಬಿಸುತ್ತವೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಎಸ್.ಪಿ. ದಿನೇಶ್, ಶಿವಕುಮಾರ್, ಕೆ.ರಂಗನಾಥ್, ಸುವರ್ಣ ನಾಗರಾಜ್, ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ಚಿನ್ನಪ್ಪ, ಅಲ್ತಾಫ್ ಪರ್ವಿಜ್, ಮಂಜುಳಾ, ರೇಷ್ಮಾ, ಮಧು, ಮುಂತಾದವರಿದ್ದರು.

Abhi

Abhi

Leave a Reply

Your email address will not be published. Required fields are marked *