ಶಿವಮೊಗ್ಗ ಲೋಕಸಭಾ ಚುನಾವಣೆ : 27 ನಾಮಪತ್ರದಲ್ಲಿ 1 ತಿರಸ್ಕೃತ

ಶಿವಮೊಗ್ಗ :- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಾರ್ವಜನಿಕ ಚುನಾವಣಾ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ನಿನ್ನೆವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರ ಸಲ್ಲಿಕೆಯಾಗಿತ್ತು.

ಇಂದು ನಾಮಪತ್ರ ಪರಿಶೀಲನೆ ನಡೆಸಿದ್ದು, 27ರ ಪೈಕಿ 1 ನಾಮಪತ್ರ ತಿರಸ್ಕೃತಗೊಂಡಿದೆ.

ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಂದು ನಾಮಪತ್ರ ಸಂಬಾನ್‌ಖಾನ್ ನಾಮಪತ್ರ ತಿರಸ್ಕೃತಗೊಂಡಿದೆ. ಭಾರತ ಹಿಂದೂ ಮಹಾಸಭಾ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷ ಅಭ್ಯರ್ಥಿಗಳು ಪಕ್ಷದ ಮಾಹಿತಿ ಸಮರ್ಪಕವಾಗಿ ನೀಡದಿದ್ದ ರಿಂದ ಇವರನ್ನು ಪಕ್ಷೇತರ ಅಭ್ಯರ್ಥಿಯಾಗಿ ತೀರ್ಮಾನಿಸಲಾಗಿದೆ.

ಉಳಿದಂತೆ ಬಿಜೆಪಿಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಗೀತಾ ಶಿವರಾಜ್‌ಕುಮಾರ್, ರಾಷ್ಟ್ರಭಕ್ತ ಬಳಗದಿಂದ ಕೆ.ಎಸ್.ಈಶ್ವರಪ್ಪಇವರ ನಾಮಪತ್ರ ಅಂಗೀಕೃತವಾಗಿದೆ.

Abhi

Abhi

Leave a Reply

Your email address will not be published. Required fields are marked *