Flowers in Chania

ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ರೋಡ್ ಶೋ

ಶಿವಮೊಗ್ಗ:- ನಗರದ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ರೋಡ್ ನಡೆಸಲಾಯಿತತು. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದರ್ ಕೇರಿ, ಪೊಲೀಸ್ ಚೌಕಿ ಫೈಓವರ್ ನಿಂದ ಕಾಶಿಪುರ, ಹಾಲ್ಗೊಳ ವೃತ್ತದವರೆಗೆ ರೋಡ್ ಶೋ ಸಾಗಿತು.

ಗಾಡಿಕೊಪ್ಪದಿಂದ ಪುನಃ ಹಾಲ್ಗೊಳ ವೃತ್ತ, ಗೋಪಾಳ ರಸ್ತೆ ಮೂಲಕ ಗೋಪಾಳ ಬಸ್ ನಿಲ್ದಾಣದಿಂದ ಗೋಪಾಳ ಮುಖ್ಯರಸ್ತೆ, ಟಿಪ್ಪು ನಗರ ಮುಖ್ಯರಸ್ತೆ ಮೂಲಕ ಅಣ್ಣಾನಗರ ಮಿಳಗಟ್ಟ, ಇಂದಿರಾ ಕ್ಯಾಂಟೀನ್ ಮುಂಭಾಗದಿಂದ, ಕೆ.ಎಸ್.ಆರ್.ಟಿ.ಸಿ. ಮುಂಭಾಗದಿಂದ, ಡಬಲ್ ರೋಡ್, ಎನ್.ಟಿ. ರಸ್ತೆ ಬಲಭಾಗದವರೆಗೆ ಹರಕೆರೆ, ಕುರುಬರ ಪಾಳ್ಯದಿಂದ ಸೀಗೇಹಳ್ಳಿ ವೃತ್ತದವರೆಗೆ ನಡೆದ ರೋಡ್ ಶೋ ನಡೆಸಲಾಯಿತು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾತನಾಡಿ, ಸಮಾಜದಲ್ಲಿ ಬಡತನ, ಹಸಿವು, ಅಸಮಾನತೆಯ ಪಿಡುಗು ನಿವಾರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ದುಡಿಯುತ್ತಿದೆ. ಅದೇ ಉದ್ದೇಶಕ್ಕೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದರು.
ನಟ ದುನಿಯಾ ವಿಜಯ್ ಮಾತನಾಡಿ, ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರು  ನೀಡಿದ ಕೊಡುಗೆ ಜನ ಮಾನಸದಲ್ಲಿ ಉಳಿದಿವೆ. ಅದೇ ರೀತಿ, ಗೀತಕ್ಕ ಕೂಡ ಜನಪರ ಆಡಳಿತ ನಡೆಸಿ, ಎಲ್ಲರೂ ಮೆಚ್ಚುವಂತಹ ನಾಯಕಿಯಾಗಿ ಹೊರಹೊಮ್ಮಲಿದ್ದಾರೆ. ಆದ್ದರಿಂದ, ಈ ಭಾರಿ ಒಂದು ಅವಕಾಶ ಕಲ್ಪಿಸಿಕೊಡಿ ಎಂದರು.

ತರಿಕೆರೆ ಶಾಸಕ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಗೀತಾ ಶಿವರಾಜ್ ಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಿ ಎಂದು ಕೋರಿದರು.

ನಟ ಶಿವರಾಜ್ ಕುಮಾರ್, ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ರವಿಕುಮಾರ್, ಕಾಂಗ್ರೆಸ್ ಮುಖಂಡರಾದ ಎನ್. ರಮೇಶ್, ಮರಿಯಪ್ಪ, ಹೆಚ್.ಸಿ.ಯೋಗೀಶ್, ರೇಖಾ ರಂಗನಾಥ, ಹೆಚ್.ಪಿ. ಗಿರೀಶ್, ಶರತ್ ಮರಿಯಪ್ಪ ಮೊದಲಾದವರಿದ್ದರು.

Abhi

Abhi

Leave a Reply

Your email address will not be published. Required fields are marked *