
ಶಿವಮೊಗ್ಗ :- ಈ ವರ್ಷ ಪಿತೃ ಪಕ್ಷ ಕಳೆದ ಸೆ. ೧೮ರಿಂದ ಅಕ್ಟೋಬರ್ 2 ತನಕ ಇದೆ, ನೀವೂ ಸಹ ಶ್ರಾದ್ಧ ಮಾಡಿ ! ಅತೃಪ್ತ ಪೂರ್ವಜರ ತೊಂದರೆಗಳಿಂದ ರಕ್ಷಿಸುವ ಮತ್ತು ಅವರಿಗೆ ಸದ್ಗತಿಯನ್ನು ಪ್ರದಾನಿಸುವ ದೇವತೆ ದತ್ತ ‘ಶ್ರೀ ಗುರುದೇವ ದತ್ತ ’ ನಾಮಜಪ ಮತ್ತು ಶ್ರಾದ್ಧವಿಧಿಗಳನ್ನೂ ಮಾಡಬೇಕು.

ಅತೃಪ್ತ ಪೂರ್ವಜರಿಂದ ತೊಂದರೆಯಾಗುವ ಕಾರಣಗಳು ಮತ್ತು ತೊಂದರೆಯ ಸ್ವರೂಪ ಇತ್ತೀಚಿನ ಕಾಲದಲ್ಲಿ ಹಿಂದಿನಂತೆ ಯಾರೂ ಶ್ರಾದ್ಧ-ಪಕ್ಷ, ಹಾಗೆಯೇ ಸಾಧನೆಯನ್ನೂ ಮಾಡುವುದಿಲ್ಲ. ಕಲಿಯುಗದಲ್ಲಿನ ಬಹುತೇಕ ಜನರು ಸಾಧನೆಯನ್ನು ಮಾಡದಿರುವುದರಿಂದ ಮಾಯೆಯಲ್ಲಿ ಸಿಲುಕಿಕೊಂಡಿರುತ್ತಾರೆ. ಇದರಿಂದಾಗಿ ಇಂತಹವರ ಲಿಂಗದೇಹಗಳು ಮೃತ್ಯುವಿನ ನಂತರ ಅತೃಪ್ತವಾಗಿ ಉಳಿಯುತ್ತವೆ. ಆದುದರಿಂದ ಬಹುತೇಕ ಎಲ್ಲರಿಗೂ ಪೂರ್ವಜರ ಅತೃಪ್ತ ಲಿಂಗದೇಹಗಳಿಂದ ಆಧ್ಯಾತ್ಮಿಕ ತೊಂದರೆಯಾಗುತ್ತಿದೆ. ಇಂತಹ ಅತೃಪ್ತ ಲಿಂಗದೇಹಗಳು ಮರ್ತ್ಯಲೋಕದಲ್ಲಿ ಸಿಲುಕಿಕೊಳ್ಳುತ್ತವೆ. (ಮರ್ತ್ಯಲೋಕವು ಭೂಲೋಕ ಮತ್ತು ಭುವರ್ಲೋಕದ ಮಧ್ಯದಲ್ಲಿದೆ) ದತ್ತನ ನಾಮಜಪದಿಂದ ಮರ್ತ್ಯಲೋಕದಲ್ಲಿ ಸಿಲುಕಿಕೊಂಡಿರುವ ಪೂರ್ವಜರಿಗೆ ಗತಿಯು ಸಿಗುತ್ತದೆ. ಮುಂದೆ ಅವರು ಅವರ ಕರ್ಮಗಳಿಗನುಸಾರ ಮುಂದುಮುಂದಿನ ಲೋಕಕ್ಕೆ ಹೋಗುವುದರಿಂದ ಸಹಜವಾಗಿಯೇ ಅವರಿಂದ ನಮಗಾಗುವ ತೊಂದರೆಗಳ ಪ್ರಮಾಣವು ಕಡಿಮೆಯಾಗುತ್ತದೆ.
ಅತೃಪ್ತ ಪೂರ್ವಜರಿಂದ ತೊಂದರೆಯಾಗುವ ಸಾಧ್ಯತೆ ಇದೆ ಅಥವಾ ತೊಂದರೆ ಆಗುತ್ತಿದೆ, ಎಂಬುದನ್ನು ಅಧ್ಯಾತ್ಮದಲ್ಲಿನ ಉನ್ನತರೇ ಹೇಳಬಲ್ಲರು. ಹಾಗೆ ಹೇಳುವ ಉನ್ನತರು ಸಿಗದೇ ಇದ್ದಾಗ ಮತ್ತು ಮುಂದೆ ನೀಡಿದ ತೊಂದರೆಗಳು ಆಗುತ್ತಿದ್ದಲ್ಲಿ ಅವು ಅತೃಪ್ತ ಪೂರ್ವಜರಿಂದ ಆಗುತ್ತಿವೆ ಎಂದು ತಿಳಿದು ಸಾಧನೆಯನ್ನು ಮಾಡಬೇಕು? ವಿವಾಹವಾಗದಿರುವುದು, ಪತಿ-ಪತ್ನಿಯರಲ್ಲಿ ಹೊಂದಾಣಿಕೆಯಾಗದಿರುವುದು, ಗರ್ಭಧಾರಣೆಯಾಗದಿರುವುದು, ಗರ್ಭಧಾರಣೆಯಾದರೂ ಗರ್ಭಪಾತವಾಗುವುದು, ಮಕ್ಕಳು ಸಮಯಕ್ಕೆ ಮೊದಲೇ ಹುಟ್ಟುವುದು, ಬುದ್ಧಿಮಾಂದ್ಯ ಅಥವಾ ಅಂಗವಿಕಲ ಮಕ್ಕಳು ಹುಟ್ಟುವುದು, ಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ಸಾಯುವುದು ಇತ್ಯಾದಿ. ವ್ಯಸನ, ದಾರಿದ್ರ್ಯ, ಶಾರೀರಿಕ ರೋಗ ಮುಂತಾದ ಲಕ್ಷಣಗಳಿರುವ ಸಾಧ್ಯತೆಯೂ ಇರುತ್ತದೆ.
ಕೆಲವು ಜನರು ಮೃತವ್ಯಕ್ತಿಯ ಸ್ಮರಣೆಗೆಂದು ಮನೆಯ ಎದುರು ಅಥವಾ ಬದಿಯಲ್ಲಿ ಅವರ ಹೆಸರಿನ ಸಮಾಧಿಯನ್ನು ಕಟ್ಟುತ್ತಾರೆ. ಈ ಸಮಾಧಿಗೆ ನಿಯಮಿತವಾಗಿ ಹೂವುಗಳನ್ನು ಅರ್ಪಿಸಿ ಪೂಜೆಯನ್ನೂ ಮಾಡುತ್ತಾರೆ. ಮೃತವ್ಯಕ್ತಿಯ ಮೇಲಿನ ಪ್ರೇಮ ಮತ್ತು ಅವರ ನೆನಪಿಗಾಗಿ ಮನೆಯಲ್ಲಿ ಅವರ ಛಾಯಾಚಿತ್ರಗಳನ್ನು ಇಡುವುದು, ದೇವರ ಕೋಣೆಯಲ್ಲಿ ನಾಣ್ಯವನ್ನಿರಿಸುವುದು ಅಥವಾ ಮನೆಯ ಮುಂದೆ ಸಮಾಧಿಯನ್ನು ಕಟ್ಟುವುದು ಮುಂತಾದ ಕೃತಿಗಳಿಂದ ಆ ವ್ಯಕ್ತಿಯ ಲಿಂಗದೇಹವು ಅಲ್ಲಿ ಸಿಲುಕಿಕೊಳ್ಳುತ್ತದೆ. ಇದರಿಂದ ಅವರಿಗೆ ಮುಂದಿನ ಗತಿ ಸಿಗುವುದಿಲ್ಲ, ಹಾಗೆಯೇ ಅವರಿಗೆ ಯಾತನೆಯನ್ನೂ ಸಹಿಸಬೇಕಾಗುತ್ತದೆ. ಭಗೀರಥನು ಪೂರ್ವಜರ ಮುಕ್ತಿಗಾಗಿ ತಪಸ್ಸನ್ನು ಮಾಡಿ ಗಂಗೆಯನ್ನು ಪೃಥ್ವಿಯಲ್ಲಿ ಅವತರಿಸುವಂತೆ ಮಾಡಿದ ಉದಾಹರಣೆಯು ಪಿತೃಋಣ ತೀರಿಸಿದುದರ ಉತ್ತಮ ಆದರ್ಶವಾಗಿದೆ. ನಾವು ಪೂರ್ವಜರನ್ನು ಮೇಲೆ ಹೇಳಿದ ಸ್ಥೂಲ ವಿಷಯಗಳಲ್ಲಿ ಸಿಲುಕಿಸಿದರೆ ಮತ್ತು ಅವರಿಗೆ ಗತಿ ಸಿಗಲು ನಾಮಜಪ ಮುಂತಾದ ಸಾಧನೆಯನ್ನು ಮಾಡದೇ ಇದ್ದಲ್ಲಿ ನಮ್ಮಿಂದ ಪಿತೃ ಋಣ ತೀರುವುದಿಲ್ಲ. ಹಾಗೆಯೇ ಪೂರ್ವಜರಿಗೆ ತೊಂದರೆಯಾಗಿ ಅವರು ನಮ್ಮ ಸಾಧನೆಯಲ್ಲಿ ಅಡಚಣೆಗಳನ್ನು ತರುತ್ತಾರೆ. ಪಿತೃ ಋಣವನ್ನು ತೀರಿಸಲು ಮತ್ತು ಪೂರ್ವಜರ ಮುಕ್ತಿಯನ್ನು ತಡೆಗಟ್ಟದೇ ಅವರಿಗೆ ಗತಿ ಸಿಗಬೇಕೆಂದು ‘ಶ್ರೀ ಗುರುದೇವ ದತ್ತ |’ ನಾಮಜಪ ಮತ್ತು ಶ್ರಾದ್ಧವಿಧಿಗಳನ್ನೂ ಮಾಡಬೇಕು.
ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ದತ್ತ’
ಸಂಗ್ರಹ: .ವಿನೋದ ಕಾಮತ್ ರಾಜ್ಯ ವಕ್ತಾರರು, ಸನಾತನ ಧರ್ಮ