
ಶಿವಮೊಗ್ಗ :- ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದಿರಾ ಗಾಂಧಿ ರಸ್ತೆಯಲ್ಲಿ ಬಾಲರಾಜ್ ಅರಸ್ ರಸ್ತೆ ಕಡೆಯಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಗೆ ಸಂಚರಿಸಲು (ENTRY) ಅವಕಾಶವನ್ನು ನೀಡಿ, ಇಂದಿರಾ ಗಾಂಧಿ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಯಿಂದ ಬಾಲರಾಜ್ ಅರಸ್ ರಸ್ತೆ ಕಡೆಗೆ ಸಂಚಾರ ನಿಷೇಧಿಸಿ (NO ENTRY) ಏಕಮುಖ ಸಂಚಾರ ವ್ಯವಸ್ಥೆಗೆ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳು ಅದೇಶ ನೀಡಿದ್ದಾರೆ.
ಕೆ.ಜಿ.ಐ.ಡಿ ಕಚೇರಿಯಿಂದ ಬಾರ್ ಅಸೋಸಿಯೇಷನ್ ಗೇಟ್ವರೆಗೆ ವಾಹನ ನಿಲುಗಡೆ ನಿಷೇಧ
ಶಿವಮೊಗ್ಗದ ಕೆ. ಜಿ.ಐ.ಡಿ. ಕಚೇರಿ ಪ್ರಾರಂಭದಿಂದ ಬಾರ್ ಅಸೋಸಿಯೇಷನ್ ಕಟ್ಟಡದ ನಂತರದಲ್ಲಿರುವ ಗೇಟ್ವರೆಗೆ ಇರುವ ರಸ್ತೆಯಲ್ಲಿ ಎರಡು ಬದಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದು, ನ್ಯಾಯಾಲಯದ ಹಿಂಬದಿಯಲ್ಲಿರುವ ಪಾರ್ಕಿಂಗ್ ಸ್ಥಳಕ್ಕೆ ಓಡಾಡಲು ತೀವ್ರ ಅಡಚಣೆಯಾಗುತ್ತಿದೆ ಹಾಗೂ ರಸ್ತೆಯು ಕಿರಿದಾಗಿರುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ಕೆ 1988 ಕಲಂ 115ರ ಅನ್ವಯ ಕೆ.ಜಿ.ಐ.ಡಿ. ಕಚೇರಿ ಪ್ರಾರಂಭದಿAದ ಬಾರ್ ಅಸೋಸಿಯೇಷನ್ ಕಟ್ಟಡದ ನಂತರದಲ್ಲಿರುವ ಗೇಟ್ವರೆಗೆ ಇರುವ ರಸ್ತೆಯಲ್ಲಿ ಎರಡು ಬದಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಪಾರ್ಕಿಂಗ್ ನಿಷೇಧಿಸಿ ಜಿಲ್ಲಾಧಿಕಾರಿಗಳು ಅದೇಶ ನೀಡಿದ್ದಾರೆ.
https://shorturl.fm/qrXg9