
ಶಿವಮೊಗ್ಗ :- ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಶ್ರೀ ಅಯ್ಯಪ್ಪ ಸ್ವಾಮಿ ಧಾರ್ಮಿಕ ದತ್ತಿ ಕರ್ನಾಟಕದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಜ. 14ರಂದು ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತೊತ್ಸವ ಸಮಾರಂಭ ಅದ್ಧೂರಿಯಾಗಿ ಆಚರಿಸ ಲಾಗುವುದು ಎಂದು ಡಾ. ವಿಶ್ವ ಸಂತೋಷ ಭಾರತೀ ಶ್ರೀಗಳು ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಆರಗ ಜನೇಂದ್ರ ವಹಿಸಲಿದ್ದಾರೆ. ಗೌರಿಗದ್ದೆ ವಿನಯ್ ಗುರೂಜಿ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕರಾದ ಚನ್ನಬಸಪ್ಪ, ಚಂದ್ರಪ್ಪ, ಡಿ.ಎಸ್. ಅರುಣ್, ಡಾ. ಧನಂಜಯ್ ಸರ್ಜಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ಬಿಎಎಸ್ಎಸ್ ಅಧ್ಯಕ್ಷ ಶಬರೀಶ್ ಸ್ವಾಮಿ, ನಟ ದಿಗಂತ್, ಆಸ್ಟ್ರೇಲಿಯಾ ಅಯ್ಯಪ್ಪ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ್ ಶರ್ಮಾ, ಉದ್ಯಮಿ ಅಬ್ದುಲ್ ಮುಜೀಬ್ ಇವರಿಗೆ ಹರಿಹರ ಪೀಠ ಪ್ರಶಸ್ತಿ ನೀಡಿ ಸನ್ಮಾನಿಸ ಲಾಗುವುದು ಎಂದು ತಿಳಿಸಿದ್ದಾರೆ.
