
ಬೆಂಗಳೂರು :- ಪ್ರಸಕ್ತ ಸಾಲಿನ ಆಯವ್ಯಯವನ್ನು ಮಾ. 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರು ಗಳೊಂದಿಗೆ ಪ್ರಸಕ್ತ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರಿಗೆ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು.
ಮಾ. 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾ. 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ ೩ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ತಿಳಿಸಿದರು.
