
ಶಿವಮೊಗ್ಗ :- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಮಾ. 15 ರಿಂದ 18ರವರೆಗೆ ಕಾಲೇಜಿನ ಆವರಣದಲ್ಲಿ 26 ನೇ ರಾಜ್ಯಮಟ್ಟದ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ’ಸದೃಡ-2.0 ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಸುದ್ದಿಗೋಷ್ಟಿಯಲ್ಲಿ ವಿವರಿಸಿದರು.
ಮಾ. 15ರ ಬೆಳಗ್ಗೆ 9ಗಂಟೆಗೆ ವಿಟಿಯು ಕುಲಪತಿ ಡಾ. ವಿದ್ಯಾ ಶಂಕರ್ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಅರ್ಜುನ ಪ್ರಶಸ್ತಿ ಪುರಸ್ಕೃತ ಎಸ್.ಡಿ. ಈಶನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದು, ವಿಟಿಯು ಕುಲಸಚಿವ ಡಾ. ಬಿ.ಇ. ರಂಗಸ್ವಾಮಿ, ಮಲ್ಯ ಮಾಪನ ಕುಲಸಚಿವ ಡಾ.ಟಿ.ಎನ್. ಶ್ರೀನಿವಾಸ, ಹಣಕಾಸು ಅಧಿಕಾರಿ ಡಾ.ಪ್ರಶಾಂತ್ ನಾಯಕ್, ಎನ್ಇಎಸ್ ಉಪಾಧ್ಯಕ್ಷ ಸಿ.ಆರ್. ನಾಗರಾಜ, ಕಾರ್ಯದರ್ಶಿ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ, ಖಜಂಚಿ ಡಿ.ಜಿ. ರಮೇಶ್, ಪ್ರಾಂಶು ಪಾಲ ಡಾ. ವೈ. ವಿಜಯಕುಮಾರ್, ವಿಟಿಯು ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪಿ.ವಿ. ಕಡಗದಕೈ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಚೇತನ್ ಎ.ವಿ ಉಪಸ್ಥಿತರಿರುವರು. ಇದೇ ವೇಳೆ ಸದೃಡ 2.0 ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಲಾಗುತ್ತದೆ ಎಂದರು.
ಮಾ. 18 ರ ಮಧ್ಯಾಹ್ನ ೩ಗಂಟೆಗೆ ನಡೆಯುವ ಸಮಾರೋಪ ಸಮಾ ರಂಭದಲ್ಲಿ ವಿಟಿಯು ಮಲ್ಯಮಾಪನ ಕುಲಸಚಿವ ಡಾ. ಟಿ.ಎನ್. ಶ್ರೀನಿವಾಸ ಮುಖ್ಯ ಅತಿಥಿಗಳಾಗಿ ಭಾಗವಹಿ ಸಲಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಿದ್ದಾರೆ.
ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ಮಾತನಾಡಿ, ರಾಜ್ಯದ ವಿವಿಧ 150 ಇಂಜಿನಿಯ ರಿಂಗ್ ಕಾಲೇಜುಗಳ ಸುಮಾರು 2 ಸಾವಿರ ವಿದ್ಯಾರ್ಥಿಗಳು ಈ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ. ನಾಲ್ಕು ದಿನಗಳ ಈ ಕ್ರೀಡಾಕೂಟದಲ್ಲಿ ಸುಮಾರು 44 ವಿವಿಧ ಅಥ್ಲೆಟಿಕ್ಸ್ ಕ್ರೀಡೆಗಳು ನಡೆಯಲಿದ್ದು, ಇಡಿಎಂ ಸಾಫ್ಟವೇರ್ ಮೂಲಕ ಆಧುನಿಕ ತಂತ್ರಜನಗಳನ್ನು ಬಳಸಿ ತೀರ್ಪು ನೀಡುವ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಪಟುಗಳಿಗೆ ಕಾಲೇಜಿನಲ್ಲಿಯೆ ವಸತಿ ವ್ಯವಸ್ಥೆ ಇರುತ್ತದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಎನ್ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್, ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್, ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ಚೇತನ್, ಎನ್ಇಎಸ್ ಪಿ.ಆರ್.ಓ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.
