ಶಿವಮೊಗ್ಗ :- ಮಹಾನಗರ ಪಾಲಿಕೆ ಜಾಗದಲ್ಲಿ ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ತಕ್ಷಣ ತೆರುವುಗೊಳಿಸಬೇಕು ಎಂದು ಶಾಸಕ ಚನ್ನಬಸಪ್ಪ ಪಾಲಿಕೆ ಆಯುಕ್ತರನ್ನು ಆಗ್ರಹಿಸಿದರು.
ಇಂದು ಬಿಜೆಪಿ ಶಿವಮೊಗ್ಗ ನಗರ ಘಟಕವು ಈ ಕುರಿತು ಆಯುಕ್ತರಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿ, ರಾಗಿಗುಡ್ಡ ಬಂಗಾರಪ್ಪ ಬಡಾವಣೆಯಲ್ಲಿ ಜು.೫ರಂದು ರಂದು ಕೆಲ ಮುಸ್ಲಿಂ ಕಿಡಿಗೇಡಿಗಳು ನಗರದಲ್ಲಿ ಶಾಂತಿ ಸೌಹಾರ್ದತೆಯನ್ನು ಕೆಡಿಸುವ ಸಲುವಾಗಿ ಬಡಾವಣೆಯಲ್ಲಿ ಇದ್ದ ಗಣೇಶನ ಮೂರ್ತಿಯನ್ನು ಕಾಲಿನಿಂದ ಒದ್ದು, ನಾಗರ ದೇವರ ವಿಗ್ರಹವನ್ನು ಚರಂಡಿಗೆ ಬಿಸಾಡಿ ಹೋಗಿರುವುದು ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ.
ಸಿದ್ದಿಕಿ ಎಂಬ ಮುಸ್ಲಿಂ ಯುವಕನ ಅಲ್ಲಿಯೇ ರಸ್ತೆ ಪಕ್ಕದಲ್ಲಿ ಪಾಲಿಕೆ ಜಗದಲ್ಲಿ ಅನಧಿಕೃತ ಕಟ್ಟಡ ನಿರ್ಮಿಸುತ್ತಿದ್ದು, ಕೆಲ ದಿನಗಳಿಂದ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅನೈತಿಕ, ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಸರ್ಕಾರಿ ಜಗದಲ್ಲಿ ಕಟ್ಟಡ ನಿರ್ಮಾಣವಾಗಿದೆ ಎನ್ನುವ ಮಾಹಿತಿಯನ್ನು ಕೂಡ ಸ್ಥಳೀಯರು ನೀಡಿದ್ದರಿಂದ ಅಧಿಕಾರಿಗಳು ಪರೀಶೀಲಿಸಬೇಕು. ಕಟ್ಟಡ ಆಕ್ರಮವಾಗಿದ್ದರೆ ಅದನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ವಿಭಾಗದಲ್ಲಿ ಸಾರ್ವಜನಿಕರಿಗಾಗಿ ಮೀಸಲಿಟ್ಟ ಸರ್ಕಾರಿ ಜಗಗಳನ್ನು ಅನ್ಯಕೋಮಿನವರು ಒತ್ತುವರಿ ಮಾಡಿಕೊಂಡು ಅಕ್ರಮ ಕಟ್ಟಡಗಳನ್ನು ಈಗಾಗಲೇ ನಿರ್ಮಿಸಿರುವುದು ಸಾರ್ವಜನಿಕರಿಂದ ಗಮನಕ್ಕೆ ಬಂದಿದ್ದು, ಹಾಗಾಗಿ ಆ ಪ್ರದೇಶದಲ್ಲಿರುವ ಎಲ್ಲಾ ಸರ್ಕಾರಿ ಜಗಗಳನ್ನು ಬೇಲಿಗಳನ್ನು ಹಾಕಿಸಿ, ಸ್ವಚ್ಛತೆ ಮಾಡಿಸಿ, ಪಾಲಿಕೆ ವಶಕ್ಕೆ ಪಡೆಯ ಬೇಕು ಎಂದರು.
ಮನವಿ ಸ್ವೀಕರಿಸಿ ಮಾತನಾಡಿದ ಆಯುಕ್ತ ಮಾಯಣ್ಣಗೌಡ, ಕರ್ನಾಟಕ ಮುನಸಿಪಾಲ್ಟಿ ಕಾಯ್ದೆಯ ೧೮೭ ನೇ ವಿಧಿಯ ಅನ್ವಯ ಪಾಲಿಕೆ ಜಗದಲ್ಲಿ ಯಾರೇ ಆಗಲಿ ಅನಧಿಕೃತ ಕಟ್ಟಡ ಕಟ್ಟಿದರೆ ಅವುಗಳನ್ನು ಮುಲಾಜಿಲ್ಲದೆ ನೆಲಸಮ ಮಾಡಲು ಅವಕಾಶವಿದೆ. ಶಿವಮೊಗ್ಗ ನಗರದಲ್ಲೂ ಪಾಲಿಕೆ ಆಸ್ತಿ ಕಬಳಿಕೆ ಆಗಿದ್ದು ಕಂಡುಬಂದರೆ ನಿರ್ಧಾಕ್ಷಿಣ್ಯವಾಗಿ ಕಡುವಲಾಗುವುದು. ಇನ್ನೆರಡು ದಿನದ ಒಳಗಾಗಿ ಸದರಿ ಅನಧಿಕ್ರತ ನೆಲಸಮ ಮಾಡಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ನಗರಾಧ್ಯಕ್ಷ ಮೋಹನ ರೆಡ್ಡಿ. ಪ್ರಮುಖರಾದ ನಾಗರಾಜ್, ಜನೇಶ್ವರ, ಮಂಜುನಾಥ, ಪ್ರಭು, ಶಿವಕುಮಾರ್, ಅನಿತಾ ರವಿಶಂಕರ, ವಿಶ್ವನಾಥ, ಸುರೇಖಾ ಮುರಳೀಧರ, ಸಂತೋಷ್ ಬಳ್ಳೆಕೆರೆ, ರಶ್ಮಿ ಶ್ರೀನಿವಾಸ್, ಚೈತ್ರಾ ನಾಯಕ್, ಕಿರಣ್, ಶಿವಾನಂದ ಮೊದಲಾದವರಿದ್ದರು.