ಶಿವಮೊಗ್ಗ :- ನಗರದಲ್ಲಿ ಸೆ. 22ರ ನಾಳೆ ನಡೆಯುವ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆಸುವ ಹಿನ್ನಲೆಯಲ್ಲಿ ಸಾಕಷ್ಟು ಪೊಲೀಸ್ ಬಂದು ಬಸ್ತ್ ಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಈ ಪೈಕಿ 3 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ೨೫ ಪೊಲೀಸ್ ಉಪಾಧೀಕ್ಷಕರು, 60 ಪೋಲಿಸ್ ನಿರೀಕ್ಷಕರು, 110 ಪೊಲೀಸ್ ಉಪನಿರೀಕ್ಷಕರು, 200 ಸಹಾಯಕ ಪೊಲೀಸ್ ನಿರೀಕ್ಷಕರು, 3500 ಪೊಲೀಸ್ ಹೆಡ್ ಕಾನ್ಸ್ ಟೆಬಲ್, ಪೊಲೀಸ್ ಕಾನ್ಸ್ ಟೆಬಲ್ ಮತ್ತು ಗೃಹರಕ್ಷಕ ದಳ ಸಿಬ್ಬಂದಿಗಳು, 1ಅರ್ ಎಎಫ್ ತುಕಡಿ 8 ಡಿಎಆರ್ ತುಕಡಿ, 1ಕ್ಯೂಆರ್ ಟಿ ತುಕಡಿ, 1 ಡಿಎಸ್ ಡಬ್ಲ್ಯೂಎಟಿ ತುಕಡಿ, 10 ಕೆಎಸ್ ಆರ್ ಪಿ ತುಕಡಿಗಳು, 5 ದ್ರೋಣ್ ಕ್ಯಾಮರಾಗಳು, 100 ವಿಡಿಯೋಗ್ರಾಫರ್ ಗಳನ್ನು ನಿಯೋಜಿಸಲಾಗಿರುತ್ತದೆ.
ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೆ. 21ರ ಇಂದು ಮಧ್ಯಾಹ್ನ ಶಿವಮೊಗ್ಗ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಮಿಥುನ್ ಕುಮಾರ್ ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆರವರು ಪೊಲೀಸ್ ಕವಾಯಿತು ಮೈದಾನ ಶಿವಮೊಗ್ಗದಲ್ಲಿ ಬ್ರೀಫಿಂಗ್ ನಡೆಸಿ, ಬಂದೋಬಸ್ತ್ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ.