
ಶಿವಮೊಗ್ಗ :- ಆಟೋ ಕಾಂಪ್ಲೆಕ್ಸ್ನಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ತಕ್ಷಣ ಕಲ್ಪಿಸಲು ಆಗ್ರಹಿಸಿ ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದಿಂದ ಇಂದು ನಗರಕ್ಕಾಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಚನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
2002ರಲ್ಲಿ ಶಿವಮೊಗ್ಗ ವಿಧಾನಸಭಾ ಸದಸ್ಯರಾಗಿದ್ದ ಹೆಚ್.ಎಂ. ಚಂದ್ರಶೇಖರಪ್ಪ ಅವರ ಮುಖಾಂತರ ಆಗಿನ ಮುಖ್ಯಮಂತ್ರಿ ಬಂಗಾರಪ್ಪರವರ ಆದೇಶದ ಮೇರೆಗೆ ಕೆಐಎಡಿಬಿ ವತಿಯಿಂದ ಶಿವಮೊಗ್ಗ ನಗರದ ಗಾರ್ಡನ್ ಏರಿಯಾದಲ್ಲಿದ್ದ ಅಂದಿನ ಮಲೆನಾಡು ಭಾಗದ ಪ್ರಸಿದ್ಧ ವರ್ಕ್ ಶಾಪ್ಗಳು, ಆಟೋ ಮೊಬೈಲ್ಗಳು, ಗ್ಯಾರೇಜ್ಗಳನ್ನು ಆಟೋ ಕಾಂಪ್ಲೆಕ್ಸ್ ಆವಣಕ್ಕೆ ಸ್ಥಳಾಂತರಿಸಲಾಯಿತು.

ಆದಾದ ನಂತರ ಕೂಡ ವಿವಿಧ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಹಲವಾರು ಭಾರಿ ಹೋರಾಟ ಮಾಡಿ ಮುಖ್ಯಮಂತ್ರಿ ಬಂಗಾರಪ್ಪನವರಿಗೆ 1ಅಡಿಗೆ ಐವತ್ತು ರೂಪಾಯಿಗಳಂತೆ ನೀಡಲು ಒತ್ತಾಯಿಸಿದ್ದೆವು. ಆಗ ಅವರು ಸ್ಪಂದಿಸಿ ಅಡಿಗೆ ಐವತ್ತು ರೂ ಗಳಿಗೆ ನಿಗಧಿಪಡಿಸಿದರು. ಈ ರೀತಿಯಾಗಿ ಸುಮಾರು 252 ಮಳಿಗೆಗಳ ಮಾಲೀಕರಾಗಿ ಮುಂದುವರೆಸಿಕೊಂಡು ಬಂದಿದ್ದೇವೆ. ಜೊತೆಗೆ ಮಹಾನಗರ ಪಾಲಿಕೆಗೆ ತೆರಿಗೆಗಳನ್ನು ಕೂಡ ಪ್ರಾಮಾಣಿಕವಾಗಿ ಕಟ್ಟುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇದುವರೆಗೆ ಮಹಾನಗರ ಪಾಲಿಕೆಯು ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಬಿ.ಹೆಚ್ ರಸ್ತೆಯಿಂದ ನೇರ ಸಂಪರ್ಕ, ತ್ಯಾಜ್ಯ ವಿಲೇವಾರಿ ನಿರ್ವಹಣೆ, ಚರಂಡಿ ವ್ಯವಸ್ಥೆಗಳನ್ನು ಮಾಡಿಕೊಡಲು ಹಲವರಾರು ಭಾರಿ ಮನವಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.
ಕೂಡಲೆ ಕುಡಿಯುವ ನೀರು ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸಿ, ಸಮಸ್ಯೆಗಳನ್ನು ಬಗೆಹರಿಸಿ ಸುತ್ತಮುತ್ತಲಿನ ಜಿಲ್ಲೆಗಳಿಂದ ಬರುವ ಜನಗಳಿಗೆ ವ್ಯವಸ್ಥಿತವಾಗಿ ಸುಸಜ್ಜಿತವಾದ ಆಟೋ ಕಾಂಪ್ಲೆಕ್ಸ್ ಅನ್ನು ಮೇಲ್ದರ್ಜೆಗೆ ಕೊಂಡೊಯ್ಯಲು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಸಂಘದ ಅಧ್ಯಕ್ಷ ಎಸ್. ಚಿನ್ನಪ್ಪ, ಕಾರ್ಯದರ್ಶಿ ರಂಗನಾಥ ಇ ಹಾಗೂ ಪದಾಧಿಕಾರಗಳಾದ ಪಿ. ವೆಂಟೇಶ್, ಮಾಲತೇಶ್ ಕೆ., ಇದಾಯತ್ ಖಾನ್ ವಿ., ವೆಂಕಟೇಶ್ ಪಿ., ಜಾನ್ಮೇಥಿ, ಜಾರ್ಜ್ ಹಾಗೂ ಅಂತೋಣಿ ಸೇರಿದಂತೆ ಇನ್ನಿತರ ಸದಸ್ಯರಿದ್ದರು.
