google.com, pub-9939191130407836, DIRECT, f08c47fec0942fa0

ಶಿವಮೊಗ್ಗ :- ಶಿವಮೊಗ್ಗ ಎಂ.ಆರ್.ಎಸ್. 220 ಕೆವಿ.ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 17ರ ನಾಳೆ ಬೆಳಿಗ್ಗೆ 9.30 ರಿಂದ ಸಂಜೆ 4ಗಂಟೆವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿ.

ಮಂಡ್ಲಿ ಭಾಗದಲ್ಲಿ ತುರ್ತು ಕಾಮಗಾರಿ : ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಜ. 17ರ ನಾಳೆ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಪೇಪರ್ ಪ್ಯಾಕೇಜ್, ಅರಮನೆ ಹೋಟೆಲ್, ಹಳೇ ಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಮಲ್ನಾಡ್ ಕೊಕೊ,, ತಿವಾರಿ ಕಾಂಕ್ರೀಟ್, ಶಾರದಾನಗರ 1 ರಿಂದ 5ನೇ ಕ್ರಾಸ್, ಭೈರವ ಟಾರ್ಪಲ್, ಓಂ ಲ್ಯಾಬ್, ಗಣೇಶ ಇಂಜಿನಿಯರಿಂಗ್ ವರ್ಕ್ಸ್ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಲು ಮೆಸ್ಕಾಂ ತಿಳಿಸಿದೆ.

Leave a Reply

Your email address will not be published. Required fields are marked *